11:54 PM (IST) Dec 13

Karnataka News Live 13 December 2025ವನ್ಯಜೀವಿ ಸಂರಕ್ಷಣೆ - ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!

Golden Star Ganesh wildlife conservation :ಏಷಿಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ಆಯೋಜಿಸಿದ್ದ 5ನೇ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ರಾಯಭಾರಿ ಗೋಲ್ಡನ್ ಸ್ಟಾರ್ ಗಣೇಶ್ ಚಾಮರಾಜನಗರದ ಮೀಣ್ಯಂ ಗ್ರಾಮದಲ್ಲಿ ಭಾಗವಹಿಸಿದ್ದರು. ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದರು.

Read Full Story
11:00 PM (IST) Dec 13

Karnataka News Live 13 December 2025ಚಿಕ್ಕಮಗಳೂರು - ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ, ಹೈಟೆಕ್ ಕಾರ್‌ನಲ್ಲಿ ಗೋವುಗಳನ್ನು ಕಳ್ಳತನ ಮಾಡುತ್ತಿದ್ದವರನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿದ್ದಾರೆ. ಆದರೆ, ಕಳ್ಳರು ಅತಿವೇಗವಾಗಿ ಚಲಾಯಿಸಿ ತಪ್ಪಿಸಿಕೊಂಡಿದ್ದು, ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ..

Read Full Story
10:37 PM (IST) Dec 13

Karnataka News Live 13 December 2025BREAKING - ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ,ಚಿಕ್ಕಮಲ್ಲನಹೊಳೆ ಗ್ರಾಮಸ್ಥರು ಆತಂಕ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಭಯಭೀತರಾದ ಗ್ರಾಮಸ್ಥರು ಮನೆಯಿಂದ ಹೊರಬಂದಿದ್ದು, ಇದು ವಿಜಯನಗರ ಜಿಲ್ಲೆಯ ಕಡೆಯಿಂದ ಬಂದ ಶಬ್ದವಿರಬಹುದು ಎಂದು ತಹಸೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ.
Read Full Story
10:06 PM (IST) Dec 13

Karnataka News Live 13 December 202520 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!

ಹಾವೇರಿಯ ಶಿಗ್ಗಾವಿ ಕೋರ್ಟ್‌ನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್, 20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 80 ವರ್ಷದ ಅಜ್ಜ ಮತ್ತು 75 ವರ್ಷದ ಅಜ್ಜಿಯನ್ನು ಯಶಸ್ವಿಯಾಗಿ ಒಂದುಗೂಡಿಸಿದೆ. ನ್ಯಾಯಾಧೀಶರು ಮತ್ತು ವಕೀಲರ ಮನವೊಲಿಕೆಯ ಫಲವಾಗಿ, ನಾಲ್ಕು ಜೋಡಿಗಳು ಒಂದಾಗಿದ್ದಾರೆ.

Read Full Story
10:03 PM (IST) Dec 13

Karnataka News Live 13 December 2025ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ

ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಪೊಲೀಸ್ ಪೇದೆ ಜೊತೆ ಮೋನಿಕಾ ಪರಾರಿಯಾದ ಘಟನೆ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಸ್ವತಃ ಮೋನಿಕಾ ಕೇಸ್‌ಗೆ ಟ್ವಿಸ್ಟ್ ಕೊಟ್ಟಿದ್ದಾಳೆ.

Read Full Story
09:43 PM (IST) Dec 13

Karnataka News Live 13 December 2025ನವೋದಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕನಿಂದಲೇ ಮೋಸ! ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಟ್ಟ ತಂದೆ!

ಉತ್ತರ ಕನ್ನಡದ ಹಳಿಯಾಳದಲ್ಲಿ ನಡೆದ ನವೋದಯ ಪ್ರವೇಶ ಪರೀಕ್ಷೆಯಲ್ಲಿ, ಶಿಕ್ಷಕರೊಬ್ಬರು ತಮ್ಮ ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಪರೀಕ್ಷೆಯನ್ನು ರದ್ದುಗೊಳಿಸಿ, ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Read Full Story
09:23 PM (IST) Dec 13

Karnataka News Live 13 December 2025ಉತ್ತರಕನ್ನಡ - ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!

ಭಟ್ಕಳ ತಾಲೂಕಿನ ಬೆಳಕೆ ಗರಡಿ ಹಿತ್ತಲು ಪ್ರದೇಶದಲ್ಲಿ, ಕೋರಿಯರ್‌ ನೀಡುವ ನೆಪದಲ್ಲಿ ಬಂದ ಇಬ್ಬರು ಕಳ್ಳರು 70 ವರ್ಷದ ವೃದ್ಧೆಯೊಬ್ಬರಿಗೆ ನೀರು ಕೇಳಿ ಗಮನ ಬೇರೆಡೆ ಸೆಳೆದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read Full Story
08:23 PM (IST) Dec 13

Karnataka News Live 13 December 2025ಬೆಂಗಳೂರು - 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಕರೆಂಟ್‌ ಶಾಕ್‌ ಹೊಡೆದು ಪ್ರಾಣತೆತ್ತ ಯುವಕ!

ಬೆಂಗಳೂರಿನ ಗಿರಿನಗರದಲ್ಲಿ, ಹೈಟೆನ್ಷನ್ ವೈಯರ್ ಮೇಲೆ ಕುಳಿತಿದ್ದ ಸಾಕು ಗಿಳಿಯನ್ನು ರಕ್ಷಿಸಲು ಯತ್ನಿಸಿದ 32 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ಅಪಾರ್ಟ್‌ಮೆಂಟ್ ಕಾಂಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್ ಬಳಸಿ ಗಿಳಿಯನ್ನು ಓಡಿಸಲು ಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. 

Read Full Story
08:20 PM (IST) Dec 13

Karnataka News Live 13 December 2025ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್

ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಅಮೆರಿಕನ್ ಯುವತಿಯೊಬ್ಬರು ಅಸ್ವಸ್ಥರಾದಾಗ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ಸಿಪಿಆರ್ ನೀಡಿ ಪ್ರಾಣ ಉಳಿಸಿದ್ದಾರೆ. ವಿಮಾನ ಇಳಿಯುವವರೆಗೂ ಯುವತಿಯ ಆರೈಕೆ ಮಾಡಿ, ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ. ಸಮಯೋಚಿತ ಸೇವೆಗೆ ವ್ಯಾಪಕ ಪ್ರಶಂಸೆ

Read Full Story
07:57 PM (IST) Dec 13

Karnataka News Live 13 December 2025ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ

ಶಿರಸಿ ತಾಲೂಕಿನ ಐತಿಹಾಸಿಕ ಶಂಕರ ನಾರಾಯಣ ದೇವಳದ ಪಾಳುಬಿದ್ದಿದ್ದ ಕಲ್ಯಾಣಿಯನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುನಶ್ಚೇತನಗೊಳಿಸಲಾಗಿದೆ. ಈ ಕಾಮಗಾರಿಯಿಂದಾಗಿ ಕಲ್ಯಾಣಿಯ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಾಗಿದ್ದು, ದೈನಂದಿನ ಬಳಕೆಗೆ ಅನುಕೂಲವಾಗಿದೆ ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

Read Full Story
07:57 PM (IST) Dec 13

Karnataka News Live 13 December 2025ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್‌ನಲ್ಲಿ ಮಧ್ಯರಾತ್ರಿ ಗಲಾಟೆ ನಡೆದಿದೆ. ಸರ್ವೀಸ್ ವಿಚಾರವಾಗಿ ಉದ್ಯಮಿ ಸತ್ಯ ನಾಯ್ಡು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪ. ಕಬ್ಬನ್ ಪಾರ್ಕ್ ಪೊಲೀಸರಿಂದ ಘಟನೆ ಬಗ್ಗೆ ತನಿಖೆ 

Read Full Story
07:42 PM (IST) Dec 13

Karnataka News Live 13 December 2025ಕರಾವಳಿಗೆ ಕೇಂದ್ರದ ಬಲ, ಹಂಗಾರಕಟ್ಟೆ ಸೇರಿ ಕರಾವಳಿಯ ಹಲವು ಬಂದರುಗಳ ಅಭಿವೃದ್ಧಿಗೆ ನೂರಾರು ಕೋಟಿ ಮಂಜೂರು

ಕೇಂದ್ರದ ಸಾಗರಮಾಲಾ ಮತ್ತು ಮತ್ಸ್ಯ ಸಂಪದ ಯೋಜನೆಯಡಿ ಹಂಗಾರಕಟ್ಟೆ ಸೇರಿದಂತೆ ಕರಾವಳಿಯ ಹಲವು ಬಂದರುಗಳ ಅಭಿವೃದ್ಧಿಗೆ ಕೋಟ್ಯಂತರ ರುಪಾಯಿ ಅನುದಾನ ಮಂಜೂರಾತಿ ಪ್ರಕ್ರಿಯೆಯಲ್ಲಿದೆ. ಇದರೊಂದಿಗೆ, ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಶೀಘ್ರ ಆರಂಭಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ

Read Full Story
07:22 PM (IST) Dec 13

Karnataka News Live 13 December 2025ಶಾಕಿಂಗ್ - ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!

ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ 40 ಎಕರೆಗೂ ಅಧಿಕ ಕಬ್ಬಿನ ಗದ್ದೆ ಹೊತ್ತಿ ಉರಿದಿದೆ. ಈ ದುರ್ಘಟನೆಯಿಂದ ಏಳು ಮಂದಿ ರೈತರು ಸುಮಾರು 80 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆಯನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.
Read Full Story
07:02 PM (IST) Dec 13

Karnataka News Live 13 December 2025ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ - ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ

ಕಾಂತಾರ ಸಿನೆಮಾದ ಯಶಸ್ಸಿಗಾಗಿ ನಟ ರಿಷಬ್ ಶೆಟ್ಟಿ ಸಲ್ಲಿಸಿದ್ದ ಹರಕೆಯ ಕೋಲದ 'ಎಣ್ಣೆಬೂಳ್ಯ' ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಬಾರೆಬೈಲ್ ಜಾರಂದಾಯ ದೈವಸ್ಥಾನದ ಸಮಿತಿಯು ಸ್ಪಷ್ಟೀಕರಣ ನೀಡಿದೆ. ದೈವದ ಕಟ್ಟುಕಟ್ಟಳೆಯಲ್ಲಿ ಯಾವುದೇ ಲೋಪವಾಗಿಲ್ಲ ಮತ್ತು ದೈವದ ಅನುಮತಿಯಂತೆ ಎಲ್ಲವೂ ನಡೆದಿದೆ ಎಂದಿದೆ.

Read Full Story
06:52 PM (IST) Dec 13

Karnataka News Live 13 December 2025ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ ಆಗಿಹೋದ, ಯುವಕನ ಹಲ್ಲೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!

Madikeri honey trap case :ಫೇಸ್ಬುಕ್‌ನಲ್ಲಿ ಪರಿಚಯವಾದ ಮಡಿಕೇರಿಯ ಯುವತಿಯನ್ನು ಭೇಟಿಯಾಗಲು ಬಂದ ಮಂಡ್ಯದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಇದು ಹನಿಟ್ರ್ಯಾಪ್ ಕೃತ್ಯ ಎಂದು ಶಂಕಿಸಲಾಗಿದ್ದು, ಯುವತಿ ಪೊಲೀಸರ ವಶದಲ್ಲಿದ್ದಾಳೆ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Read Full Story
06:51 PM (IST) Dec 13

Karnataka News Live 13 December 2025ಬಿಸಿ ನೀರಿಗೆ ಒಂದು ಟಾಬ್ಲೆಟ್​ ಹಾಕಿದ್ರೆ ಸಾಕು, ಎರಡೇ ನಿಮಿಷದಲ್ಲಿ ನೂಡಲ್ಸ್​ ರೆಡಿ- ಏನಿದು AI Tablet?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಮ್ಯಾಗಿ ಟ್ಯಾಬ್ಲೆಟ್ ವಿಡಿಯೋ ಎಲ್ಲರ ಗಮನ ಸೆಳೆದಿದೆ. ಬಿಸಿ ನೀರಿಗೆ ಹಾಕಿದ ತಕ್ಷಣ ನೂಡಲ್ಸ್ ಸಿದ್ಧವಾಗುವ ಈ ಟ್ಯಾಬ್ಲೆಟ್​ನ ಅಸಲಿಯತ್ತೇನು? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​ ವಿಷ್ಯ

Read Full Story
06:45 PM (IST) Dec 13

Karnataka News Live 13 December 2025ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಲು ಎಲ್ಲೂ ಹೋಗಬೇಕಿಲ್ಲ, ಮನೆ ಬಾಗಿಲಿಗೆ ಬರಲಿದೆ ವ್ಯಾನ್

ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಲು ಎಲ್ಲೂ ಹೋಗಬೇಕಿಲ್ಲ, ಮನೆ ಬಾಗಿಲಿಗೆ ಬರಲಿದೆ ವ್ಯಾನ್, ಅತೀ ಸುಲಭವಾಗಿ ಪಾಸ್‌ಪೋರ್ಟ್ ಈಗ ಮನೆಬಾಗಿಲಲ್ಲೇ ಸಿಗುವ ವಿನೂತನ ಯೋಜನೆ ಬೆಂಗಳೂರಿನಲ್ಲಿ ಆರಂಭಗೊಂಡಿದೆ. 

Read Full Story
06:24 PM (IST) Dec 13

Karnataka News Live 13 December 2025New Year Mars Transit - ಮೀನ ರಾಶಿಗೆ ಮಂಗಳನ ಪ್ರವೇಶ - ಐದು ರಾಶಿಗೆ ಭಾಗ್ಯೋದಯ- ಆಸೆ ಈಡೇರುವ ಕಾಲ

2026ರ ಏಪ್ರಿಲ್ 2 ರಂದು ಮಂಗಳನು ಮೀನ ರಾಶಿಗೆ ಪ್ರವೇಶಿಸಲಿದ್ದು, ಈ ಸಂಚಾರವು ಕೆಲವು ರಾಶಿಗಳಿಗೆ ಅತ್ಯಂತ ಶುಭಫಲಗಳನ್ನು ತರಲಿದೆ. ವೃಷಭ, ಕರ್ಕಾಟಕ, ವೃಶ್ಚಿಕ, ಮಕರ ಮತ್ತು ಮೀನ ರಾಶಿಯವರಿಗೆ ಈ ಅವಧಿಯಲ್ಲಿ ಸಂಪತ್ತು, ಯಶಸ್ಸು ಮತ್ತು ವೃತ್ತಿಯಲ್ಲಿ ಪ್ರಗತಿ ಕಾಣುವ ಯೋಗವಿದೆ.
Read Full Story
06:16 PM (IST) Dec 13

Karnataka News Live 13 December 2025Coriander Leaves Farming - ಇಷ್ಟು ಎಲೆಗೆ ಅಷ್ಟು ಯಾಕೆ ಕೊಡ್ತೀರಿ? ಸಣ್ಣ ಪಾಟ್‌ನಲ್ಲೇ ಕೊತ್ತುಂಬರಿ ಬೆಳೆಯಲು Tips

ಅಡುಗೆಯಲ್ಲಿ ಕೊತ್ತಂಬರಿ ಸೊಪ್ಪು ಇಲ್ಲ ಅಂದ್ರೆ ಏನೋ ಮಿಸ್‌ ಆದಂತಹ ಅನುಭವ ಆಗುವುದು. ಕೊತ್ತಂಬರಿ ಸೊಪ್ಪಿಗೆ ಬಹುತೇಕ ಯಾವಾಗಲೂ ಡಿಮ್ಯಾಂಡ್‌ ಇರುವುದು. ಒಮ್ಮೆ ಈ ಸೊಪ್ಪು ತಂದರೂ ಕೂಡ ಕೆಲವೊಮ್ಮೆ ಬಳಸೋಕೆ ಮರೆತು ಹೋಗಿ ಅಲ್ಲೇ ಕೊಳೆಯಬಹುದು, ಒಣಗಲೂಬಹುದು. ಕೊತ್ತಂಬರಿ ಬೆಳೆಯೋದು ಹೇಗೆ?

Read Full Story
05:59 PM (IST) Dec 13

Karnataka News Live 13 December 2025Amruthadhaare - ಮರಿಡುಮ್ಮ ಅಂದ್ರೆ ಸುಮ್ನೇನಾ? ಅಪ್ಪನ ಬಾಯಿಂದ್ಲೇ ಸತ್ಯ ಹೇಗೆ ಹೊರತರಿಸಿದ ನೋಡಿ!

ಅಮೃತಧಾರೆ ಧಾರಾವಾಹಿಯಲ್ಲಿ ಬೇರೆ ಬೇರೆಯಾಗಿದ್ದ ಗೌತಮ್ ಮತ್ತು ಭೂಮಿಕಾ ಒಂದಾಗುವ ಸಮಯ ಹತ್ತಿರವಾಗಿದೆ. ಭೂಮಿಕಾಳ ಹುಟ್ಟುಹಬ್ಬದ ಸಂಭ್ರಮದ ನಡುವೆ, ಆಕಾಶ್ ಮತ್ತು ಲವ್ ಅಜ್ಜಿಯ ಪ್ರಯತ್ನದಿಂದ ಈ ಜೋಡಿ ಮತ್ತೆ ಒಂದಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಕಥೆ ಸುಖಾಂತ್ಯದತ್ತ ಸಾಗುತ್ತಿದೆ.
Read Full Story