ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆನಗರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.
Karnataka News Live: KPTCL ಕೆಲಸ, ಶನಿವಾರ ಬೆಂಗಳೂರಲ್ಲಿ ಕರೆಂಟ್ ಇರಲ್ಲ..!

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಸುಳ್ಳು ಹೇಳಿ ಜೈಲಿಗೆ ಸೇರಿದ್ದ ಬುರುಡೆ ಪಾತ್ರಧಾರಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕರೂ ಶೂರಿಟಿ ಇಲ್ಲ ದೇ ಶಿವಮೊಗ್ಗದ ಜೈಲಿನಲ್ಲಿ ಚಿನ್ನಯ್ಯ ಮಂಕಾ ಗಿದ್ದು, ಮೌನಕ್ಕೆ ಶರಣಾಗಿದ್ದ. ಈಗ 1 ಲಕ್ಷ ಬಾಂಡ್, 2 ಜಾಮೀನುದಾರರಿಂದ ಬೆಳ್ತಂಗಡಿ ಕೋರ್ಟ್ಗೆ ಶೂರಿಟಿ ನೀಡಲಾಗಿದೆ. ಚಿನ್ನಯ್ಯ ಬಿಡುಗಡೆಗೆ ನ್ಯಾಯಾಧೀಶರು ಅಸ್ತು ಎಂದಿದ್ದಾರೆ. ಡಿ.18 ರಂದು ಚಿನ್ನಯ್ಯ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ನ.24ರಂದು 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು .ಚಿನ್ನಯ್ಯನಿಗೆ ಶೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗ ಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ಆ.23ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.
Karnataka News Live 18 December 2025KPTCL ಕೆಲಸ, ಶನಿವಾರ ಬೆಂಗಳೂರಲ್ಲಿ ಕರೆಂಟ್ ಇರಲ್ಲ..!
Karnataka News Live 18 December 2025'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
ಸಚಿವ ಭೈರತಿ ಸುರೇಶ್ ಅವರ 'ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆಯು ಸುವರ್ಣಸೌಧದ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕ್ಷಮೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
Karnataka News Live 18 December 2025ಚಾಮರಾಜನಗರ - ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ
Karnataka News Live 18 December 2025ಅಂದು ಸುದೀಪ್ಗೆ ಆ್ಯಕ್ಸಿಡೆಂಟ್! Bigg Boss ವೀಕೆಂಡ್ನಲ್ಲಿ ನಡೆದದ್ದೇನು? ಕಿಚ್ಚನಿಂದ ಶಾಕಿಂಗ್ ವಿಷ್ಯ ರಿವೀಲ್
ಒಮ್ಮೆ ಬಿಗ್ ಬಾಸ್ ತೊರೆಯುವುದಾಗಿ ಹೇಳಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದ ಕಿಚ್ಚ ಸುದೀಪ್, ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ. ಇತ್ತೀಚೆಗೆ, ತಮಗಾದ ಅಪಘಾತದಿಂದ ತೀವ್ರ ಕಾಲುನೋವಿದ್ದರೂ, ಅದನ್ನು ಲೆಕ್ಕಿಸದೆ 'ಸೂಪರ್ ಸಂಡೆ ವಿತ್ ಕಿಚ್ಚ' ಸಂಚಿಕೆಯನ್ನು ನಿಂತುಕೊಂಡೇ ನಿರೂಪಣೆ ಮಾಡಿದೆ ಎಂದಿದ್ದಾರೆ.
Karnataka News Live 18 December 2025ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ
ವಿಧಾನಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರು, ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಧಿ ಜಾರಿಗೆ ತಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ 'ಭಾರತ ರತ್ನ' ನೀಡಲು ಶಿಫಾರಸು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಖರ್ಗೆಯವರನ್ನು ಅಂಬೇಡ್ಕರ್ಗೆ ಹೋಲಿಸಿದರು.
Karnataka News Live 18 December 2025Bigg Boss ಮನೇಲಿ ಆ ವಿಷಯ ಹೇಳೋಕೆ ಧೈರ್ಯ ಇರೋ ಪ್ರಪಂಚದ ಮೊದಲ ಗಂಡ ಅಂದ್ರೆ ವಿ ರವಿಚಂದ್ರನ್! ಡೌಟ್ ಬೇಡ
ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಮನೆಯೊಳಗಡೆ ವಿ ರವಿಚಂದ್ರನ್ ಅವರು ಎಂಟ್ರಿ ಕೊಟ್ಟಿದ್ದಾರೆ. ಪ್ಯಾರ್ ಸಿನಿಮಾದಲ್ಲಿ ರಾಶಿಕಾ ಶೆಟ್ಟಿ ಅವರ ತಂದೆ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ. ಪ್ಯಾರ್ ಎಂದರೆ ಲವ್ ಎಂದರ್ಥ. ಈಗ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೀತಿ ಬಗ್ಗೆ ಮಾತನಾಡಿದ್ದಾರೆ.
Karnataka News Live 18 December 20252025ರ ಪ್ರವಾಸೋದ್ಯಮದಲ್ಲಿ ಬೆಂಗಳೂರು ದರ್ಬಾರ್ - ಬಿಸಿನೆಸ್, ವಿರಾಮಕ್ಕೆ ಪ್ರವಾಸಿಗರ ಮೊದಲ ಆಯ್ಕೆ ಸಿಲಿಕಾನ್ ಸಿಟಿ!
ಖ್ಯಾತ ಪ್ರವಾಸೋದ್ಯಮ ಸಂಸ್ಥೆ 'ಕ್ಲಿಯರ್ಟ್ರಿಪ್' ವರದಿಯ ಪ್ರಕಾರ, ಬೆಂಗಳೂರು ಈಗ ಬಿಸಿನೆಸ್ ಮತ್ತು ವಿರಾಮ ಪ್ರವಾಸೋದ್ಯಮದಲ್ಲಿ ಭಾರತದ ಅಗ್ರಗಣ್ಯ ನಗರವಾಗಿ ಹೊರಹೊಮ್ಮಿದೆ. ಅತಿ ದೀರ್ಘಾವಧಿಯ ಹೋಟೆಲ್ ವಾಸ್ತವ್ಯ, ಏಕಾಂಗಿ ಪ್ರಯಾಣಿಕರ ನೆಚ್ಚಿನ ತಾಣವಾಗಿದೆ.
Karnataka News Live 18 December 2025Karna Serial - ಅಮ್ಮ ಇರಬೇಕು ಅನ್ನೋದು ಇದಕ್ಕೆ ನೋಡಿ - ಮಗ ಕರ್ಣನನ್ನು ಉಳಿಸಿದ ಮಾಲತಿ
ರಮೇಶ್ ರೂಪಿಸಿದ್ದ ಮರು ಮಾಂಗಲ್ಯಧಾರಣೆ ಸಂಚಿನಿಂದ ಕರ್ಣ ಮತ್ತು ನಿತ್ಯಾ ಸಂಕಷ್ಟಕ್ಕೆ ಸಿಲುಕಿದ್ದರು. ಈ ಅಪಾಯದಿಂದ ಮಗನನ್ನು ಪಾರು ಮಾಡಿದ್ದಾಳೆ. ಅಷ್ಟರಲ್ಲಿ ನಿಧಿ, ನಿತ್ಯಾಳ ಕೊರಳಿಗೆ ತಾಳಿ ಹಾಕುವ ಮೂಲಕ ಕರ್ಣನನ್ನು ದೊಡ್ಡ ಗಂಡಾಂತರದಿಂದ ಪಾರುಮಾಡುತ್ತಾಳೆ.
Karnataka News Live 18 December 2025ಶಿವಮೊಗ್ಗ - ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಎಸ್ಐ ಮಾಂಗಲ್ಯ ಸರ ಕಳುವು - ಕಣ್ಣೀರಿಟ್ಟ ಅಧಿಕಾರಿ, ಕದ್ದವರು ಯಾರು?
Karnataka News Live 18 December 2025Bigg Boss ಗೆಲ್ಲೋರು ಗಿಲ್ಲಿ ನಟ ಅಲ್ಲವೇ ಅಲ್ಲ - ಬಾಂಬ್ ಸ್ಫೋಟದ ಭವಿಷ್ಯ ನುಡಿದಿದ್ದ ಖ್ಯಾತ ಜ್ಯೋತಿಷಿ ಹೇಳಿದ್ದೇನು?
Karnataka News Live 18 December 2025ವೈದ್ಯಾಧಿಕಾರಿಯಿಂದ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
ವಿಜಯನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ವೈದ್ಯಾಧಿಕಾರಿಯ ನಿರಂತರ ಕಿರುಕುಳದಿಂದ ಮನನೊಂದು ಕರ್ತವ್ಯನಿರತ ನರ್ಸ್ ಸುನಿತಾ ಅವರು 20ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Karnataka News Live 18 December 2025ಜ್ಯೋತಿಷಿ ಹೇಳಿದ್ದಕ್ಕೆ ಜೀವನದ ದಾರಿ ಬದಲಿಸಿದ Mahanati Show ಗಗನಾ; ರಕ್ಷಿತಾ ಪ್ರೇಮ್, ವಿಜಯ್ ಶಾಕ್
Mahanati Show Gagana Bhari News: ಸಿನಿಮಾ ಕ್ಷೇತ್ರಕ್ಕೂ ಜ್ಯೋತಿಷ್ಯಕ್ಕೂ ನಂಟಿದೆ. ಜ್ಯೋತಿಷಿ ಹೇಳಿದರು ಎಂದು ಸಿನಿಮಾ ನಟ-ನಟಿಯರು ಹೆಸರು ಬದಲಾಯಿಸಿಕೊಂಡ ಉದಾಹರಣೆ ಇದೆ, ಸಿನಿಮಾದಿಂದ ದೂರ ಇದ್ದ ಉದಾಹರಣೆಯಿದೆ. ಈಗ ಐಟಿ ಕಂಪೆನಿ ಉದ್ಯೋಗ ಬಿಟ್ಟ ಉದಾಹರಣೆ ಕೂಡ ಇದೆ.
Karnataka News Live 18 December 2025ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರೊಲ್ಲ, ಇದು ಕೇವಲ ವದಂತಿ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ತಳ್ಳಿಹಾಕಿದ್ದಾರೆ. ಮೊಟ್ಟೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಗುಣಮಟ್ಟದ ಪರೀಕ್ಷೆಯಲ್ಲಿ ಉತ್ತೀರ್ಣವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.
Karnataka News Live 18 December 2025ನಿರ್ಮಾಪಕ ಹರ್ಷವರ್ಧನ್ 8 ವರ್ಷದ ರಹಸ್ಯ ಬಯಲು! ಕಿಡ್ನಾಪರ್ ಆಗೋದಕ್ಕೂ ಮುನ್ನ ಕಳ್ಳನಾಗಿದ್ದ!
'ನಿನ್ನಲ್ಲೇನೋ ಹೇಳಬೇಕು' ಚಿತ್ರದ ನಿರ್ಮಾಪಕ ಹರ್ಷವರ್ಧನ್ನನ್ನು ಸಿದ್ಧಾಪುರ ಪೊಲೀಸರು ಬಂಧಿಸಿದ್ದಾರೆ. 2017ರ ಕಳ್ಳತನ ಪ್ರಕರಣದಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಈತ, ತನ್ನ ಪತ್ನಿ, ನಟಿಯೊಬ್ಬರನ್ನು ಅಪಹರಿಸಿದ ಆರೋಪವನ್ನೂ ಎದುರಿಸುತ್ತಿದ್ದನು.
Karnataka News Live 18 December 2025ಕಲರ್ಸ್ ಕನ್ನಡದಲ್ಲಿ 'ಬಿಗ್ ಬಾಸ್' ಮುಗಿದ ಬಳಿಕ ಬರಲಿರೋ ಸೀರಿಯಲ್ ಯಾವುದು? ಉತ್ತರ ಇಲ್ಲಿದೆ..
ಇನ್ನೇನು ಬಿಗ್ ಬಾಸ್ ಮುಗಿಯುವ ಹಂತಕ್ಕೆ ಬಂದಿದೆ. ಯಾರು ವಿನ್ನರ್, ಯಾರು ರನ್ನರ್ ಅಪ್, ಯಾರಿಗೆ ಮೂರನೆಯ ಸ್ಥಾನ ಎಂಬುದನ್ನಷ್ಟೇ ತಿಳಿಯುವ ಕುತೂಹಲ ಹಲವು ಸೀರಿಯಲ್ ಪ್ರಿಯರಿಗೆ (Serials) ಇದೆ. ಕಾರಣ, ಅವರಿಗೆ ಬಿಗ್ ಬಾಸ್ಗಿಂತ ಸೀರಿಯಲ್ ಕಥೆಗಳೇ ಇಷ್ಟ. ಅಂಥವರಿಗೆ ಈ ಸ್ಟೋರಿ..
Karnataka News Live 18 December 2025ಎಲ್ಲರನ್ನು ನಗಿಸೋ ಗಿಲ್ಲಿ ನಟನ ಮನಸ್ಸಿನಲ್ಲೂ ಹೇಳಲಾಗದಷ್ಟು ನೋವಿದೆ! ದುರಂತ ಪ್ರೇಮಕಥೆ ಯಾರಿಗೂ ಗೊತ್ತಿಲ್ಲ
Bigg Boss Kannada Season 12: ಖ್ಯಾತ ನಟ ವಿ ರವಿಚಂದ್ರನ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 12 ಶೋಗೆ ಆಗಮಿಸಿದ್ದಾರೆ. ರಾಶಿಕಾ ಶೆಟ್ಟಿ, ವಿ ರವಿಚಂದ್ರನ್ ನಟನೆಯ ಪ್ಯಾರ್ ಸಿನಿಮಾ ಪ್ರಚಾರಕ್ಕೆಂದು ಅವರು ದೊಡ್ಮನೆಗೆ ಬಂದಿದ್ದಾರೆ. ಆ ವೇಳೆ ಗಿಲ್ಲಿ ನಟ ತಮ್ಮ ಲವ್ಸ್ಟೋರಿ ಬಗ್ಗೆ ಮಾತನಾಡಿದ್ದಾರೆ.
Karnataka News Live 18 December 2025ಗಿಲ್ಲಿ ಅಂಟೆ ಗಿಲ್ಲಿ - ತೆಲುಗು ಅಭಿಮಾನಿಗಳಿಂದ ಸೂಪರ್ ಸಾಂಗ್ ಬಿಡುಗಡೆ, ಹುಚ್ಚೆದ್ದು ಕುಣಿಯುತ್ತಿರೋ ಫ್ಯಾನ್ಸ್
ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ತಮ್ಮ ವಿಶಿಷ್ಟ ಶೈಲಿಯಿಂದ ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರ ಆಟದ ವೈಖರಿಯನ್ನು ಮೆಚ್ಚಿ ತೆಲುಗು ಭಾಷಿಕರು 'ಗಿಲ್ಲಿ ಅಂಟೆ ಗಿಲ್ಲಿ' ಎಂಬ ಹಾಡನ್ನು ರಚಿಸಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Karnataka News Live 18 December 2025ರೈತರ ಮಕ್ಕಳನ್ನು ಮದುವೆ ಆಗುವ ಹೆಣ್ಮಕ್ಕಳಿಗೆ 10 ಲಕ್ಷ ಕೊಡುವ ಯೋಜನೆ ಜಾರಿ ಮಾಡಿ - ಪುಟ್ಟಣ್ಣ
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು, ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ₹10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಳ್ಳಿಗಳಲ್ಲಿ ಗಂಡು ಮಕ್ಕಳಿಗೆ ಹೆಣ್ಣು ಸಿಗದಿರುವ ಸಮಸ್ಯೆ ಬಗೆಹರಿಸಲು ಈ ಯೋಜನೆ ಸಹಕಾರಿ.
Karnataka News Live 18 December 2025Karna Serial - ತೇಜಸ್, ನಿತ್ಯಾ ಮುಖಾಮುಖಿ; ಇನ್ನು ಕರ್ಣನಿಗೆ ಉಳಿಗಾಲವೂ ಇಲ್ಲ, ನೆಮ್ಮದಿಯೂ ಇಲ್ಲ!
Karna Serial Today Episode: ಕರ್ಣ ಧಾರಾವಾಹಿಯಲ್ಲಿ ವೀಕ್ಷಕರು ಅಂದುಕೊಳ್ಳುವುದೊಂದು, ಆಗುವುದೊಂದು ಎನ್ನೋ ಥರ ಆಗಿದೆ. ಕರ್ಣ-ನಿತ್ಯಾ ಇನ್ನೇನು ಮದುವೆ ಆಗಬೇಕು ಎನ್ನುವಷ್ಟರಲ್ಲಿ ತೇಜಸ್ ಆಗಮನವಾಗಿದೆ, ಈಗ ಕಥೆ ಇನ್ನೊಂದು ತಿರುವು ಪಡೆದುಕೊಳ್ಳಲಿದೆ.
Karnataka News Live 18 December 2025ಗ್ಯಾರಂಟಿ ಹೆಸರಲ್ಲಿ ಲೂಟಿ, ಇದು ನುಂಗಣ್ಣಗಳ, ಲೂಟಿಕೋರರ ಸರ್ಕಾರ - ಆರ್ ಅಶೋಕ್ ತೀವ್ರ ವಾಗ್ದಾಳಿ
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಖಜಾನೆ ಲೂಟಿ ಮಾಡುತ್ತಿದೆ ಎಂದು ಸುವರ್ಣಸೌಧದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ದಿವಾಳಿಯಾಗಿದ್ದು, ತೆರಿಗೆ ಏರಿಕೆಗೂ ಸರ್ಕಾರ ಮುಂದಾಗಿದೆ ಎಂದರು.