400 Failed Students Pass in Bangalore University ಬೆಂಗಳೂರು ವಿವಿ ಎಂ.ಕಾಂ. ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶ ಯುಯುಸಿಎಂಎಸ್ ತಂತ್ರಾಂಶದ ತಾಂತ್ರಿಕ ದೋಷದಿಂದ ಲೋಪವಾಗಿತ್ತು. ಈ ತಪ್ಪನ್ನು ಸರಿಪಡಿಸಿ, ಪರಿಷ್ಕೃತ ಫಲಿತಾಂಶ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.
State News Live: ಬೆಂಗಳೂರು ವಿವಿ ಫಲಿತಾಂಶ - ಫೇಲಾಗಿದ್ದ 400 ವಿದ್ಯಾರ್ಥಿಗಳೂ ಪಾಸ್!

ಬೆಂಗಳೂರು (ಡಿ.19): ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ ಮಾಡಲಾಗಿದೆ. ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್ ಮಾಡಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 19th December: ಬೆಂಗಳೂರು ವಿವಿ ಫಲಿತಾಂಶ - ಫೇಲಾಗಿದ್ದ 400 ವಿದ್ಯಾರ್ಥಿಗಳೂ ಪಾಸ್!
Karnataka News Live 19th December: 4 ಲಕ್ಷ ಬೆಲೆ ಬಾಳುವ ಸೆ*ಕ್ಸ್ ಡಾಲ್ಸ್ ಮಾರಾಟ - ಕರ್ನಾಟಕ ನಂ.1 - ಅಂಥದ್ದೇನಿದೆ? ಮಾಲೀಕರೇ ಹೇಳಿದ್ದಾರೆ ನೋಡಿ!
ಒಂಟಿತನ ನೀಗಿಸಿಕೊಳ್ಳಲು ಪುರುಷರು ದುಬಾರಿ ಸೆ*ಕ್ಸ್ ಡಾಲ್ಸ್ ಮೊರೆ ಹೋಗುತ್ತಿದ್ದು, ಭಾರತದಲ್ಲಿ ಇದರ ಮಾರುಕಟ್ಟೆ ಬೆಳೆಯುತ್ತಿದೆ. ಅದರಲ್ಲೂ ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ, ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ.
Karnataka News Live 19th December: ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗೋಕರ್ಣ ಹಾಗೂ ಅಂಕೋಲಾದ ಆಂದ್ಲೆ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಹುದ್ದೆಯ ಕನಸು ಹಾಗೂ ರಾಜಕೀಯ ಸಮಸ್ಯೆಗಳ ಪರಿಹಾರಕ್ಕಾಗಿ ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ದ ಮೂಲಕ ಭವಿಷ್ಯದ ಅಪ್ಪಣೆ ಕೇಳಿದ್ದಾರೆ.
Karnataka News Live 19th December: ಸೆಟ್ನಲ್ಲಿ ವಾಟರ್ ಬ್ಯಾಗ್ ಒಡೀತು, ಜ್ಯೋತಿಷಿ ಹೇಳಿದಂತೆ ಖ್ಯಾತ ಹಾಸ್ಯನಟಿಗೆ ಮಗು ಜನನ; 3ನೇಯದಕ್ಕೆ ಪ್ಲ್ಯಾನ್
Bharti Singh Welcome Second Baby Boy: ಕಪಿಲ್ ಶರ್ಮಾ ಶೋ ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋ, ಅವಾರ್ಡ್ ಫಂಕ್ಷನ್ಗಳಿಗೆ ನಿರೂಪಣೆ ಮಾಡಿದ್ದ ನಟಿ, ನಿರೂಪಕಿ ಭಾರತಿ ಸಿಂಗ್ ಅವರು ಎರಡನೇ ಬಾರಿಗೆ ತಾಯಿಯಾಗಿದ್ದಾರೆ. ಇವರ ಮನೆಯಲ್ಲಿ ಖುಷಿ ಮನೆ ಮಾಡಿದೆ.
Karnataka News Live 19th December: ಬೈರತಿ ಬಸವರಾಜ್ಗೆ ಬಂಧನದ ಭೀತಿ; ಬಿಕ್ಲುಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್!
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಹಿನ್ನಡೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಸೂಚನೆ ನೀಡಲಾಗಿದೆ.
Karnataka News Live 19th December: ಹೊಸಪೇಟೆ - ಮಗನ ಜೊತೆಗೆ ಜಗಳವಾಡ್ತಿದ್ದ ಯುವಕರು ಗುಂಪು, ಬಿಡಿಸಲು ಹೋದ ತಂದೆಯನ್ನೇ ಕೊಲೆಗೈದ ಗ್ಯಾಂಗ್!
Karnataka News Live 19th December: BBK 12 - ಬೇರೆಯವರಿಗೆ ಕೇಡು ಬಯಸಿದ ರಕ್ಷಿತಾ ಶೆಟ್ಟಿಗೆ ಮುಖಭಂಗ; ಮುಖಮುಚ್ಚಿ ಕೂತ ಗಿಲ್ಲಿ ವಂಶದ ಕುಡಿ
Bigg Boss Kannada 12 Rakshita Shetty: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೀಕ್ರೆಟ್ ರೂಮ್ನಲ್ಲಿರುವ ರಕ್ಷಿತಾ ವ್ಯಕ್ತಿತ್ವ ಹೇಗೆ ಎಂದು ವೀಕ್ಷಕರಿಗೆ ಗೊತ್ತಾಗುತ್ತಲಿದೆ. ಬೇರೆಯವರಿಗೆ ಕೆಟ್ಟದ್ದು ಬಯಸಿದ್ದರೆ ಕೆಟ್ಟದ್ದೇ ಆಗುವುದು ಎನ್ನೋದು ಮತ್ತೆ ಸಾಬೀತಾಗಿದೆ. ಹಾಗಾದರೆ ಏನಾಯ್ತು?
Karnataka News Live 19th December: 'ಅಕ್ಕಾ ಅಕ್ಕಾ ಎಲ್ಲಿದೆ ರೊಕ್ಕಾ?' ಗೃಹಲಕ್ಷ್ಮಿ ಹಣ ವಿಳಂಬ,ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ 'ಗೃಹಲಕ್ಷ್ಮೀ' ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಮಹಿಳಾ ಘಟಕ ಬೃಹತ್ ಪ್ರತಿಭಟನೆ ನಡೆಸಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಿರತರು, ಹಣ ಬಿಡುಗಡೆಯಾಗದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದರು.
Karnataka News Live 19th December: ಆಟವಾಡುತ್ತಿದ್ದ ಮಗುವನ್ನು ಫುಟ್ಬಾಲ್ನಂತೆ ಒದ್ದ ಜಿಮ್ ಟ್ರೈನರ್; ಮಾರುದ್ದ ಹಾರಿಬಿದ್ದ ಮಗು!
ಬೆಂಗಳೂರಿನ ತ್ಯಾಗರಾಜ ನಗರದಲ್ಲಿ, ಜಿಮ್ ಟ್ರೈನರ್ ರಂಜನ್ ಆಟವಾಡುತ್ತಿದ್ದ ಬಾಲಕನಿಗೆ ಅಮಾನವೀಯವಾಗಿ ಒದ್ದು ವಿಕೃತಿ ಮೆರೆದಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಆರೋಪಿ ಈ ಹಿಂದೆಯೂ ಹಲವು ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ.
Karnataka News Live 19th December: ಕೋಲಾರ - ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
Karnataka News Live 19th December: ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ - ಶ್ರೀ ಶ್ರೀ ರವಿಶಂಕರ್ ಗುರೂಜಿ
ಜಿನೀವಾದ ವಿಶ್ವಸಂಸ್ಥೆಯಲ್ಲಿ ನಡೆದ ವಿಶ್ವ ಧ್ಯಾನ ದಿನದ ಕಾರ್ಯಕ್ರಮದಲ್ಲಿ, ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು. ಜಾಗತಿಕ ಸಂಘರ್ಷಗಳ ಈ ಕಾಲದಲ್ಲಿ, ಧ್ಯಾನವು ವೈಯಕ್ತಿಕ ಶಾಂತಿಯ ಜೊತೆಗೆ ಜಾಗತಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳಲು
Karnataka News Live 19th December: Lakshmi Nivasa Serial - ದುಡ್ಡೇ ದೊಡ್ಡಪ್ಪ, ತಂಗಿ ಜೀವನ ಬಲಿ ಕೊಟ್ಟ; ಇಂಥ ಅಣ್ಣ-ತಮ್ಮ ಸಾಯೋದು ಬೆಸ್ಟ್!
Lakshmi Nivasa Serial Episode: ಆಸ್ತಿಗೋಸ್ಕರ ಇಂದು ಸಮಾಜದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿ ಎಂದು ಹೊಡೆದಾಟ ಮಾಡುವುದನ್ನು ನೋಡುತ್ತೇವೆ. ಅಣ್ಣ ನಮ್ಮನವಾದರೂ ಕೂಡ, ಅತ್ತಿಗೆ ನಮ್ಮವಳಾ ಎಂಬ ಗಾದೆ ಇದೆ. ಆದರೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಈ ಗಾದೆಯನ್ನು ಉಲ್ಟಾ ಮಾಡಬೇಕಿದೆ.
Karnataka News Live 19th December: ರಾಯಚೂರು - ಮಧ್ಯರಾತ್ರಿ ಬೀದಿಬದಿ ವ್ಯಾಪಾರಿಯ ಭೀಕರ ಹತ್ಯೆ! ಸಾಲವೋ?ಹಳೆಯ ದ್ವೇಷವೋ?
ರಾಯಚೂರಿನಲ್ಲಿ ಬೀದಿಬದಿ ಡ್ರೈ ಫ್ರೂಟ್ಸ್ ವ್ಯಾಪಾರಿ ಇಮಾಮ್ ಹುಸೇನ್ನನ್ನು ನಾಲ್ವರು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳು ಪರಾರಿಯಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
Karnataka News Live 19th December: Bengaluru - ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ ಅಮಾನುಷವಾಗಿ ಕಾಲಿನಿಂದ ಒದ್ದ ಪಾಪಿ!
Karnataka News Live 19th December: ಅಬ್ಬರವಿಲ್ಲ, ಹೈಪ್ ಇಲ್ಲ, ಮನಸ್ಸಿನಲ್ಲಿ ಕ್ರಾಂತಿ ಮಾಡಿ ಕಾಡುವ ಕನ್ನಡದ ಸೀರಿಯಲ್ಗಳಿವು!
ಕೆಲ ಧಾರಾವಾಹಿಗಳು TRP ಲೆಕ್ಕಾಚಾರಕ್ಕೂ ಮೀರಿದ ಕಥೆಗಳಾಗಿರುತ್ತವೆ. ಎಷ್ಟೋ ಸೂಕ್ಷ್ಮ ಕತೆಗಳು ಬಂದಿದ್ದು, ಅವೆಲ್ಲವೂ TRP ಲೆಕ್ಕಾಚಾರದಲ್ಲಿ ಗೆದ್ದಿಲ್ಲ, ಕಥೆ ನಿರೂಪಣೆ, ಸಂಭಾಷಣೆ, ಚಿತ್ರಕಥೆಯಲ್ಲಿ ಜನರ ಮನಸ್ಸಿನಲ್ಲಿ ಹಾಗೆ ಉಳಿದುಕೊಂಡಿವೆ. ಕಂಟೆಂಟ್ ವಿಚಾರದಲ್ಲಿ ಭೇಷ್ ಎನಿಸಿಕೊಂಡ ಸೀರಿಯಲ್ಗಳಿವು
Karnataka News Live 19th December: ಸದನದಲ್ಲಿ ಸಿದ್ದು vs ಬೆಲ್ಲದ್ ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್ಗೆ ಸಿಎಂ ಸಂವಿಧಾನ ಪಾಠ
Arvind Bellad vs Siddaramaiah :ಪರಿಶಿಷ್ಟರ ಮೀಸಲಾತಿ ಹೆಚ್ಚಳವನ್ನು ತಾವು ವಿರೋಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು ಎಂಬ ಅರವಿಂದ ಬೆಲ್ಲದ್ ಆರೋಪಕ್ಕೆ ತಿರುಗೇಟು ನೀಡಿದರು.
Karnataka News Live 19th December: Glanders disease - ಮಾರಕ ರೋಗದ ಭೀತಿ, ರೇಸ್ ಕೋರ್ಸ್ ಸುತ್ತ ಕತ್ತೆ ಕುದುರೆ ಹೆಸರಗತ್ತೆ ಓಡಾಟಕ್ಕೆ ನಿರ್ಬಂಧ!
Bangalore Turf Club horse restrictions:: ಕುದುರೆ ಗ್ಲ್ಯಾಂಡರ್ಸ್ ರೋಗ ಕಾಣಿಸಿಕೊಂಡಿರುವ ಹಿನ್ನೆಲೆ ಬೆಂಗಳೂರು ಟರ್ಫ್ ಕ್ಲಬ್ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಕತ್ತೆ ಪ್ರಾಣಿಗಳ ಚಲನ ನಿರ್ಬಂಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
Karnataka News Live 19th December: 'ಎರಡನೆ ಬೆಳೆಗೆ ನೀರಿಲ್ಲ, ಸಸಿ ನಾಟಿ ಮಾಡಬೇಡಿ' ತುಂಗಭದ್ರಾ ರೈತರಿಗೆ ಸಚಿವ ತಂಗಡಗಿ ಅಚ್ಚರಿಯ ಸಲಹೆ!
ಕಾರಟಗಿಯಲ್ಲಿ ರೈತರನ್ನು ಭೇಟಿಯಾದ ಸಚಿವ ಶಿವರಾಜ ತಂಗಡಗಿ, ತುಂಗಭದ್ರಾ ಅಣೆಕಟ್ಟೆ ಕಾಮಗಾರಿಯಿಂದಾಗಿ ಬೇಸಿಗೆಯ ಎರಡನೇ ಬೆಳೆಗೆ ನೀರು ಲಭ್ಯವಿಲ್ಲದ ಕಾರಣ ಸಸಿ ನಾಟಿ ಮಾಡದಂತೆ ರೈತರಿಗೆ ಸಲಹೆ ನೀಡಿದರು. ಇದೇ ವೇಳೆ, ಕಾಂಗ್ರೆಸ್ನಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ, ಇದೆಲ್ಲಾ ಬಿಜೆಪಿಯ ಸೃಷ್ಟಿ ಎಂದರು.
Karnataka News Live 19th December: Mysore - ಗೌರವ ಕೊಡದ ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!
ಮೈಸೂರಿನಲ್ಲಿ, ತನಗೆ ಗೌರವ ನೀಡುತ್ತಿಲ್ಲ ಎಂಬ ಕಾರಣಕ್ಕೆ ಪಾನಿಪುರಿ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನೇ ಕೊಲ್ಲಲು 5 ಲಕ್ಷ ರೂಪಾಯಿ ಸುಪಾರಿ ನೀಡಿದ್ದಾನೆ. ಸುತ್ತಿಗೆಯಿಂದ ಹೊಡೆದು, ಮನೆಗೆ ಬೆಂಕಿ ಹಚ್ಚಿ ಅಪಘಾತವೆಂದು ಬಿಂಬಿಸಲು ಯತ್ನಿಸಿದರೂ, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Karnataka News Live 19th December: ಮುಡಾ ಪ್ರಕರಣ - ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತಪರಾಕಿ! ತನಿಖೆಯ ವೈಖರಿಗೆ ತೀವ್ರ ಅಸಮಾಧಾನ
ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ತನಿಖೆ ವಿಳಂಬಿಸಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ವಿಶೇಷ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಂತಿಮ ವರದಿ ಸಲ್ಲಿಸಲು ವಿಫಲವಾದರೆ ಲಭ್ಯ ದಾಖಲೆಗಳ ಆಧಾರದ ಮೇಲೆ ಬಿ-ರಿಪೋರ್ಟ್ ಬಗ್ಗೆ ತೀರ್ಮಾನಿಸುವುದಾಗಿ ಎಚ್ಚರಿಕೆ