'ತುಪ್ಪದ ಬೆಡಗಿ' ಖ್ಯಾತಿಯ ನಟಿ ರಾಗಿಣಿ ದ್ವಿವೇದಿ, ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಕನ್ನಡ ಚಿತ್ರರಂಗ ತನ್ನನ್ನು ಕಡೆಗಣಿಸಿದೆ ಮತ್ತು ಕಷ್ಟದ ಸಮಯದಲ್ಲಿ ಯಾರೂ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
- Home
- News
- State
- Karnataka News Live: ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ - ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?
Karnataka News Live: ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ - ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?

ವಿಜಯಪುರ: ವಿಧಾನ ಪರಿಷತ್ ಸದಸ್ಯ, ಬಿಜೆಪಿಗ ಕೇಶವ ಪ್ರಸಾದ್ ಅವರಿದ್ದ ಕಾರನ್ನು ತಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾ ಸಿಬ್ಬಂದಿ ನೀವು ನಿಜವಾದ ಎಂಎಲ್ಸಿ ಅನ್ನಲು ಸಾಕ್ಷಿ ಏನು? ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಎನ್ಎಚ್ 52ರ ವಿಜಯಪುರ ಹೊರವಲಯದ ಹಿಟ್ಟಿನಹಳ್ಳಿ ಬಳಿ ಭಾನುವಾರ ಪ್ರಸಾದ್ರಿದ್ದ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದರಿಂದ 1 ತಾಸು ಅವರು ಟೋಲ್ ಬಳಿಯೇ ಕಾಯುವಂತಾಯಿತು. ದಾಖಲೆ ತೋರಿಸಿದರೂ ಕಾರಿನ ಮೇಲಿನ ಎಂಎಲ್ಸಿ ಗುರುತಿನ ಚೀಟಿ ಕಿತ್ತು ಗಲಾಟೆ ಮಾಡಿ, ಚಾಲಕನ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಪ್ರಸಾದ್, ಕೊನೆಗೆ ಎಸ್ಪಿಗೆ ಕರೆ ಮಾಡಿದ ಬಳಿಕ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್, ಡಿವೈಎಸ್ಪಿ ಸ್ಥಳಕ್ಕೆ ಬಂದು ವಾಹನ ಬಿಡಿಸಿ ಕಳಿಸಿದ್ದಾರೆ.
Karnataka News Live 22 December 2025ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ - ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?
Karnataka News Live 22 December 2025ಬರೋಬ್ಬರಿ 6 ವರ್ಷಗಳ ಬಳಿಕ ಸಂಚಾರಕ್ಕೆ ಮುಕ್ತವಾಗಲಿದೆ ಬೆಂಗಳೂರಿನ ಕಾಮರಾಜ್ ರಸ್ತೆ!
ನಮ್ಮ ಮೆಟ್ರೋ ಕಾಮಗಾರಿಯಿಂದಾಗಿ 2019ರಿಂದ ಭಾಗಶಃ ಮುಚ್ಚಲಾಗಿದ್ದ ಬೆಂಗಳೂರಿನ ಕಾಮರಾಜ್ ರಸ್ತೆಯು, ಜನವರಿ 2026ರ ಆರಂಭದಲ್ಲಿ ದ್ವಿಮುಖ ಸಂಚಾರಕ್ಕೆ ಸಂಪೂರ್ಣವಾಗಿ ತೆರೆಯಲಿದೆ. ಇದು ಎಂಜಿ ರಸ್ತೆ ಮತ್ತು ಕಮರ್ಷಿಯಲ್ ಸ್ಟ್ರೀಟ್ ಸುತ್ತಮುತ್ತಲಿನ ದಟ್ಟಣೆಯನ್ನು ಕಡಿಮೆ ಮಾಡಲಿದೆ.
Karnataka News Live 22 December 2025ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗ - 6ನೇ ರೈಲು ಸೇರ್ಪಡೆ, ಇನ್ಮುಂದೆ 13 ನಿಮಿಷಕ್ಕೊಂದು ರೈಲು ಸಂಚಾರ!
ಬೆಂಗಳೂರು ಮೆಟ್ರೋದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಡಿಸೆಂಬರ್ 23, 2025 ರಿಂದ 6ನೇ ರೈಲು ಸೇವೆಗೆ ಸೇರ್ಪಡೆಯಾಗಲಿದೆ. ಇದರಿಂದಾಗಿ, ಜನದಟ್ಟಣೆ ವೇಳೆ ರೈಲುಗಳ ನಡುವಿನ ಅಂತರವು 15 ನಿಮಿಷಗಳಿಂದ 13 ನಿಮಿಷಗಳಿಗೆ ಇಳಿಕೆಯಾಗಲಿದ್ದು, ಪ್ರಯಾಣಿಕರ ಕಾಯುವ ಸಮಯ ಕಡಿಮೆಯಾಗಲಿದೆ.
Karnataka News Live 22 December 2025Bigg Bossನಲ್ಲಿ 10 ಪಟ್ಟು ಹೆಚ್ಚು ಸಂಭಾವನೆ ಸಿಕ್ಕಿದ್ದು ನಿಜ - ರಜತ್, ಚೈತ್ರಾ ಕುಂದಾಪುರ ರಿವೀಲ್ ಮಾಡಿದ್ದೇನು?
Karnataka News Live 22 December 2025ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್ - ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 'ರಾಮೇಶ್ವರಂ ಕೆಫೆ' ವಿರುದ್ಧ ದಾಖಲಾಗಿದ್ದ ಎಫ್ಐಆರ್ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೇಲ್ನೋಟಕ್ಕೆ ಆರೋಪಗಳು ಸುಳ್ಳು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ತನಿಖೆಯನ್ನು ಸ್ಥಗಿತಗೊಳಿಸಲು ಆದೇಶಿಸಿದೆ.
Karnataka News Live 22 December 2025ಶಾಸಕ ಕೆ.ಎನ್ ರಾಜಣ್ಣ-ಡಿಕೆಶಿ ಭೇಟಿಯಲ್ಲಿ ತಪ್ಪಿಲ್ಲ, ಸಿಎಂ ಸ್ಥಾನ ಬದಲಾವಣೆ ವಿಷಯದ ಚರ್ಚೆ ಇಲ್ಲ - ಶಾಸಕ ಪೊನ್ನಣ್ಣ
ಸಿಎಂ ಸ್ಥಾನದ ಗೊಂದಲದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಮತ್ತು ಡಿಸಿಎಂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ ಎಂದರು.
Karnataka News Live 22 December 2025ಚಿಂದಿ ಬಟ್ಟೆ ಧರಿಸಿ ಜಾಲತಾಣದಲ್ಲಿ ಚಿಂದಿ ಉಡಾಯಿಸಿದ Toxic ನಟಿ - ಬೆಲೆ ಕೇಳಿದ್ರೆ ಹೌಹಾರಿ ಹೋಗ್ತೀರಾ!
ಬಾಲಿವುಡ್ ನಟಿ ಹುಮಾ ಖುರೇಷಿ ಇತ್ತೀಚೆಗೆ ಧರಿಸಿದ್ದ ಹರಿದು ಚಿಂದಿಯಾದ ಡ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಫ್ಯಾಷನ್ ಹೆಸರಿನಲ್ಲಿ ಗಮನ ಸೆಳೆಯಲು ಯತ್ನಿಸಿರುವ ನಟಿಯ ಈ ಡ್ರೆಸ್ನ ಬೆಲೆ ಕೇಳಿ ಫ್ಯಾನ್ಸ್ ಹೌಹಾರಿದ್ದಾರೆ. ಸೆಲೆಬ್ರಿಟಿಗಳ ವಿಚಿತ್ರ ಫ್ಯಾಷನ್ ಕುರಿತು ಚರ್ಚೆ ಹುಟ್ಟುಹಾಕಿದೆ
Karnataka News Live 22 December 2025ಕಲಬುರಗಿ - ಮಠದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ! ಎಸ್ಕೇಪ್ ಆಗಿದ್ದಾತ ಮರಳಿ ಬಂದು ಕೃತ್ಯ
ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಮಠದಲ್ಲಿ, ಎಂಟು ತಿಂಗಳ ನಂತರ ಮರಳಿದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದಾರೆ. ಹೊಸ ಪೀಠಾಧಿಪತಿ ನೇಮಕದ ಚರ್ಚೆಯ ನಡುವೆ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
Karnataka News Live 22 December 2025'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್ಗೆ ಭಾರೀ ಕಾಮೆಂಟ್ಸ್!
Karnataka News Live 22 December 2025ಗಂಡನೂ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; 'ಯಾರಿಗೆ ಬೇಕು ಈ ಲೋಕ'ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
ಬಳ್ಳಾರಿಯ ಹುಸೇನ್ ನಗರದಲ್ಲಿ ಮುನ್ನಿ ಎಂಬ 23 ವರ್ಷದ ಗೃಹಿಣಿ ವಿಡಿಯೋ ಮಾಡುತ್ತಲೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಮನಸ್ಸು ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
Karnataka News Live 22 December 2025Bigg Boss ಬಿಗ್ ಟ್ವಿಸ್ಟ್ - ಜಾಹ್ನವಿ ಹಾದಿ ಹಿಡಿದ್ರಾ ಅಶ್ವಿನಿ ಗೌಡ? ಗಿಲ್ಲಿ ಬಹಳ ಮೋಸಗಾರ ಅಂದದ್ದು ಯಾರು?
ಬಿಗ್ಬಾಸ್ ಮನೆಯಲ್ಲಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ಸ್ಪರ್ಧಿಗಳು ಇತರರನ್ನು ನಾಮಿನೇಟ್ ಮಾಡಿದ್ದಾರೆ. ಅಶ್ವಿನಿ ಗೌಡ ಅವರು ಸ್ಪಂದನಾ ಸೋಮಣ್ಣರನ್ನು ವೀಕ್ ಎಂದು ಹೇಳಿದರೆ, ರಕ್ಷಿತಾ ಶೆಟ್ಟಿ ಧನುಷ್ ಹೆಸರನ್ನು ತೆಗೆದುಕೊಂಡರು. ಇತ್ತ ರಾಷಿಕಾ, ಗಿಲ್ಲಿ ನಟನನ್ನು ಬಹುದೊಡ್ಡ ಮೋಸಗಾರ ಎಂದಿದ್ದಾರೆ.
Karnataka News Live 22 December 2025ಡಿಜಿಟಲ್ ಬ್ಯಾನ್ ಮಾಡಿ ದೇಶಕ್ಕೆ ಮಾದರಿಯಾದ ಗಡಿಗ್ರಾಮ - ಪ್ರತಿನಿತ್ಯ ಮೊಬೈಲ್, ಟಿವಿ 2 ಗಂಟೆ ಬಂದ್!
ಬೆಳಗಾವಿಯ ಹಲಗಾ ಗ್ರಾಮವು ಡಿಜಿಟಲ್ ವ್ಯಸನಕ್ಕೆ ಕಡಿವಾಣ ಹಾಕಲು 'ಡಿಜಿಟಲ್ ಆಫ್' ಎಂಬ ಮಾದರಿ ಪ್ರಯೋಗವನ್ನು ಆರಂಭಿಸಿದೆ. ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಸೈರನ್ ಮೊಳಗಿಸಿ, ಗ್ರಾಮಸ್ಥರು ಮೊಬೈಲ್ ಮತ್ತು ಟಿವಿಗಳನ್ನು ಆಫ್ ಮಾಡಿ ಮಕ್ಕಳು ಓದುತ್ತಾರೆ.
Karnataka News Live 22 December 2025Bigg Bossನಲ್ಲಿ ಅಶ್ವಿನಿ ಗೌಡ ವ್ಯವಹಾರದ ಕುರಿತು ಯಾರೂ ತಿಳಿಯದ ಬಹುದೊಡ್ಡ ಸೀಕ್ರೆಟ್ ಬಿಚ್ಚಿಟ್ಟ ಅಭಿಷೇಕ್!
ಬಿಗ್ಬಾಸ್ ಮನೆಯಲ್ಲಿ ಜಗಳದಿಂದಲೇ ಗುರುತಿಸಿಕೊಂಡಿರುವ ಅಶ್ವಿನಿ ಗೌಡ ಅವರ ಬಗ್ಗೆ ಸಹ ಸ್ಪರ್ಧಿ ಅಭಿಷೇಕ್ ಶ್ರೀಕಾಂತ್ ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಯಾರಿಗೂ ತಿಳಿಯದ ಕೆಲವೊಂದು ಗುಟ್ಟುಗಳನ್ನು ಹೇಳಿದ್ದಾರೆ. ಅವರು ಹೇಳಿದ್ದೇನು?
Karnataka News Live 22 December 2025ಕ್ರಿಸ್ಮಸ್ ಹಿನ್ನಲೆ, ಕೆಸ್ಸಾರ್ಟಿಸಿ ಪ್ರಯಾಣಿಕರಿಗೆ ಗುಡ್ನ್ಯೂಸ್!
ಕ್ರಿಸ್ಮಸ್ ಹಬ್ಬದ ಪ್ರಯುಕ್ತ, ಕೆಎಸ್ಆರ್ಟಿಸಿ ಸಾರ್ವಜನಿಕರ ಅನುಕೂಲಕ್ಕಾಗಿ ಡಿಸೆಂಬರ್ 22 ರಿಂದ 24ರ ವರೆಗೆ 1000 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ರಾಜ್ಯದ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆಗಳು ಸಂಚರಿಸಲಿದೆ.
Karnataka News Live 22 December 2025ಮಹಿಳಾ ಆಯೋಗ ವಿರೋಧಕ್ಕೂ ಡೋಂಟ್ ಕೇರ್ , 569 ಮದ್ಯದ ಲೈಸೆನ್ಸ್ ಇ-ಹರಾಜು; ಸರ್ಕಾರದ ಖಜಾನೆಗೆ ಬರಲಿದೆಯೇ ₹1,000 ಕೋಟಿ?
ಮದ್ಯ ಮಾರಾಟ ಇಳಿಕೆಯಿಂದಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿರುವ ಅಬಕಾರಿ ಇಲಾಖೆಯು, ರಾಜ್ಯದ 477 ವೈನ್ ಶಾಪ್ ಹಾಗೂ 92 ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಲೈಸೆನ್ಸ್ಗಳನ್ನು ಇ-ಹರಾಜು ಮಾಡಲು ಅಧಿಸೂಚನೆ ಹೊರಡಿಸಿದೆ.
Karnataka News Live 22 December 2025ಓಮನ್ ಮಾರುಕಟ್ಟೆಗೆ ಲಗ್ಗೆ ಇಟ್ಟ ವಿಜಯಪುರದ ಲಿಂಬೆ ಹಣ್ಣು!
ರಾಜ್ಯದ ವಿಜಯಪುರ ಜಿಲ್ಲೆಯಿಂದ 3 ಮೆಟ್ರಿಕ್ ಟನ್ ಜಿಐ-ಟ್ಯಾಗ್ ಹೊಂದಿರುವ ಲಿಂಬೆಹಣ್ಣನ್ನು ಯಶಸ್ವಿಯಾಗಿ ಓಮನ್ಗೆ ರಫ್ತು ಮಾಡಲಾಗಿದೆ. ಈ ಹಿಂದೆ ದುಬೈ ಹಾಗೂ ಯುನೈಟೆಡ್ ಕಿಂಗ್ಡಮ್ಗೂ ರಫ್ತು ಮಾಡಲಾಗಿದೆ.
Karnataka News Live 22 December 2025ಕೊಪ್ಪಳ - ಆಟವಾಡುತ್ತಿದ್ದ 6 ವರ್ಷದ ಮಗು ಮೊದಲ ಮಹಡಿಯಿಂದ ಬಿದ್ದು ಗಂಭೀರ ಗಾಯ, ಪ್ರಾಣಾಪಾಯದಿಂದ ಪಾರು!
Karnataka News Live 22 December 2025ಕುಡಿದು ರಸ್ತೆಗೆ ಬಿದ್ದ ವ್ಯಕ್ತಿ ಬಸ್ ಚಕ್ರಕ್ಕೆ ಸಿಲುಕಿ ಸಾವು - ಸಾವಿಗೆ ಹೊಣೆ ಯಾರು? ಬಸ್ ಚಾಲಕನೇ? ಸರ್ಕಾರವೇ? ಬಾರ್ ಮಾಲೀಕರೇ?
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದಾಗ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಈ ಸಾವಿಗೆ ಕಾರಣ ಯಾರು? ಮದ್ಯ ನಿಷೇಧದ ಅಗತ್ಯತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Karnataka News Live 22 December 20252025 ಭಾರತೀಯ ಕ್ರಿಕೆಟ್ ಪಾಲಿಗೆ ಮುಟ್ಟಿದ್ದೆಲ್ಲಾ ಚಿನ್ನ; ಇಲ್ಲಿವೆ ನೋಡಿ 5 ಅವಿಸ್ಮರಣೀಯ ಕ್ಷಣಗಳು!
ಬೆಂಗಳೂರು: 2025ರ ಮುಕ್ತಾಯಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಭಾರತ ಕ್ರಿಕೆಟ್ ಪಾಲಿಗೆ ಈ ವರ್ಷ ಹಲವು ಅವಿಸ್ಮರಣೀಯ ಕ್ಷಣಗಳು ಸಿಕ್ಕಿವೆ. ಭಾರತ ಕ್ರಿಕೆಟ್ ಪಾಲಿಗೆ ಸಿಕ್ಕ ಐದು ಅಪರೂಪದ ಕ್ಷಣಗಳನ್ನು ಮತ್ತೊಮ್ಮೆ ಮೆಲುಕು ಹಾಕೋಣ ಬನ್ನಿ.
Karnataka News Live 22 December 2025ಕನ್ನಡ ಕ್ಯಾಲಿಗ್ರಫಿಗೆ ಲಭಿಸಿದ ಅಂತಾರಾಷ್ಟ್ರೀಯ ಪ್ರಶಸ್ತಿ
ದಕ್ಷಿಣ ಕೊರಿಯಾದಲ್ಲಿ ನಡೆದ ವಿಶ್ವ ಕ್ಯಾಲಿಗ್ರಫಿ ಪ್ರದರ್ಶನದಲ್ಲಿ ಕನ್ನಡ ಕ್ಯಾಲಿಗ್ರಾಫರ್ ಸುರೇಶ್ ಎಸ್.ವಾಘ್ಮೋರೆಗೆ 'ಟಾಪ್ ಎಕ್ಸಲೆನ್ಸ್ ಅವಾರ್ಡ್' ಲಭಿಸಿದೆ. ಕನ್ನಡ ಕ್ಯಾಲಿಗ್ರಫಿ ಕ್ಷೇತ್ರಕ್ಕೆ ಸಿಕ್ಕ ಮೊದಲ ಅಂತರಾಷ್ಟ್ರೀಯ ಗೌರವ, ಕನ್ನಡ ಲಿಪಿಯ ಸೌಂದರ್ಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಜಾಗತಿಕ ಮನ್ನಣೆ