- Home
- News
- State
- Karnataka News Live: Bengaluru - ಸ್ನೇಹಿತೆ ವಿಚಾರವಾಗಿ ಗೆಳೆಯರ ನಡುವೆ ಕಿತ್ತಾಟ - ಕಲ್ಲುಎತ್ತಿ ಹಾಕಿ ಒಬ್ಬ ಹತ್ಯೆ
Karnataka News Live: Bengaluru - ಸ್ನೇಹಿತೆ ವಿಚಾರವಾಗಿ ಗೆಳೆಯರ ನಡುವೆ ಕಿತ್ತಾಟ - ಕಲ್ಲುಎತ್ತಿ ಹಾಕಿ ಒಬ್ಬ ಹತ್ಯೆ

ಮೈಸೂರು: ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದೆ. ಇದು ಹೇಗೆ ಸಾಧ್ಯವಾಯಿತು? ಎಂದು ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್.ವಿಶ್ವನಾಥ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ನಾನು ಕೂಡ ಶಿಕ್ಷಣ ಸಚಿವನಾಗಿದ್ದವನು. ಇಂಟರ್ನಲ್ ಮಾರ್ಕ್ಸ್ 20ಕ್ಕೆ 20 ಕೊಡುತ್ತಾರೆ. ಇನ್ನು ಉಳಿದ 80 ಮಾರ್ಕ್ಸ್ನಲ್ಲಿ 13 ನಂಬರ್ ತೆಗೆದರೆ ಪಾಸ್. ಈ ರೀತಿಯಾದರೆ ಶಿಕ್ಷಣ ವ್ಯವಸ್ಥೆ ಎಲ್ಲಿಗೆ ಹೋಗಬೇಕು? ಪಾಸಾದ ವಿದ್ಯಾರ್ಥಿಗಳು ಮುಂದೆ ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದರು.
Karnataka News Live 26 April 2026Bengaluru - ಸ್ನೇಹಿತೆ ವಿಚಾರವಾಗಿ ಗೆಳೆಯರ ನಡುವೆ ಕಿತ್ತಾಟ - ಕಲ್ಲುಎತ್ತಿ ಹಾಕಿ ಒಬ್ಬ ಹತ್ಯೆ
Karnataka News Live 26 April 2026Bengaluru - ದೇಶದ ಮೊದಲ ಬುಲೆಟ್ ರೈಲಿಗೆ ಬೆಂಗಳೂರಿನ ಬಿಇಎಂಎಲ್ನಲ್ಲಿ ಬೋಗಿ ಉತ್ಪಾದನೆ
ಬೆಂಗಳೂರಿನ ಬಿಇಎಂಎಲ್ ಘಟಕದಲ್ಲಿ ದೇಶದ ಮೊದಲ ಬಿ28 ಬುಲೆಟ್ ರೈಲು ಬೋಗಿಗಳ ವಿನ್ಯಾಸ ಕಾರ್ಯ ಆರಂಭವಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಘಟಕವನ್ನು ಉದ್ಘಾಟಿಸಿದ್ದು, 2027ರ ಅಂತ್ಯಕ್ಕೆ ರೈಲು ಸಂಪೂರ್ಣ ಸಿದ್ಧಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Karnataka News Live 26 April 2026ಎರಡು ಜಿಲ್ಲೆಯ ರೈತರಿಗೆ ಸುಮಾರು 20 ಸಾವಿರ ಹಸು ವಿತರಣೆ ಯೋಜನೆ ಘೋಷಿಸಿದ ರಾಜ್ಯ ಸರ್ಕಾರ
ಬೆಳಗಾವಿಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆಯಂದು ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಪಶು ಸಂಗೋಪನೆ ಸಚಿವರು 2 ಜಿಲ್ಲೆಗಳ ರೈತರಿಗೆ ಶೇ.25ರ ಸಬ್ಸಿಡಿಯೊಂದಿಗೆ 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದರು.
Karnataka News Live 26 April 2026ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಶಾರೀಕ್ಗೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್, ತಾನು ಕೃತ್ಯ ಎಸಗಿದ್ದಾಗಿ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಏಪ್ರಿಲ್ 27 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟವಾಗಲಿದೆ.
Karnataka News Live 26 April 2026ಪ್ರಜ್ಞಾಹೀನ ಸ್ಥಿತಿಯಲ್ಲಿ ಸಚಿವ ಹಿರಿಯೂರು ಸುಧಾಕರ್; ಆಸ್ಪತ್ರೆಗೆ ಭೇಟಿ ನೀಡಿ ವಿವರ ಪಡೆದ ಸಿಎಂ
ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದ ಸೋಂಕಿನಿಂದ ಪ್ರಜ್ಞಾಹೀನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಶ್ವಾಸಕೋಶ ಕಸಿಗೆ ಸೂಚಿಸಿದ್ದಾರೆ.
Karnataka News Live 26 April 2026ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಜನಿವಾರಕ್ಕೆ ಕತ್ತರಿ; ವಾರದ ಹಿಂದೆ ಉಪನಯನ ಆದವಗೆ ಅಪಮಾನ
Karnataka News Live 26 April 2026Haveri - ಬರಿದಾಗಿರುವ ವರದಾ ನದಿಯಲ್ಲಿ ಚಿನ್ನದ ಹುಡುಕಾಟ; ಇರ್ಲರ್ ಸಮುದಾಯದಿಂದ ಶೋಧ
ಹಾವೇರಿ ಜಿಲ್ಲೆಯಲ್ಲಿ ಬೇಸಿಗೆಯಿಂದ ಬತ್ತುತ್ತಿರುವ ವರದಾ ನದಿಯಲ್ಲಿ, ಶಿವಮೊಗ್ಗ ಮೂಲದ ಇರ್ಲರ್ ಸಮುದಾಯದ ಕುಟುಂಬಗಳು ಚಿನ್ನದ ಕಣಗಳಿಗಾಗಿ ಹುಡುಕಾಟ ನಡೆಸುತ್ತಿವೆ. ಸಾಂಪ್ರದಾಯಿಕ ವಿಧಾನಗಳನ್ನು ಬಳಸಿ ನದಿಯ ಮರಳನ್ನು ಜಾಲಾಡಿ, ದಿನವಿಡೀ ಶ್ರಮವಹಿಸಿ ಬಂಗಾರವನ್ನು ಶೋಧಿಸುವುದು ಇವರ ಕಾಯಕವಾಗಿದೆ
Karnataka News Live 26 April 2026ಹೀಟ್ವೇವ್ ಎಫೆಕ್ಟ್; ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ - ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮವಾಗಿ ಜಲಮೂಲಗಳು ಬತ್ತುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಈ ಸಮಸ್ಯೆ ನಿಭಾಯಿಸಲು ಸರ್ಕಾರ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ಗಳನ್ನು ರಚಿಸಿದೆ.