08:51 AM (IST) Apr 28

Karnataka News Live 28 April 2026ನೋಂದಾಯಿಸಿದ್ದ ಯಾದಗಿರಿಯ 3000 ಗರ್ಭಿಣಿಯರು ಪತ್ತೆಯೇ ಇಲ್ಲ; ಆರೋಗ್ಯ ಇಲಾಖೆಯೇ ಶಾಕ್

ಯಾದಗಿರಿ ಜಿಲ್ಲೆಯಲ್ಲಿ ನೋಂದಣಿಯಾದ 30,000ಕ್ಕೂ ಹೆಚ್ಚು ಗರ್ಭಿಣಿಯರಲ್ಲಿ 3,000ಕ್ಕೂ ಅಧಿಕ ಮಂದಿಯ ಹೆರಿಗೆಯ ಮಾಹಿತಿ ಲಭ್ಯವಿಲ್ಲದಿರುವುದು ಸಾವಿರಾರು ಭ್ರೂಣಹತ್ಯೆಗಳ ಅನುಮಾನಕ್ಕೆ ಕಾರಣವಾಗಿದೆ. ಕನ್ನಡಪ್ರಭ ವರದಿಯ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯಮಟ್ಟದ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.

Read Full Story
08:37 AM (IST) Apr 28

Karnataka News Live 28 April 2026ಅಡ್ಡಬೋರ್‌ ಮೂಲಕ ಬತ್ತಿದ ಕೆರೆ, ಬಾವಿಗಳಲ್ಲಿ ನೀರಿನ ಸೆಲೆ; ಮಂಗಳೂರಿನಲ್ಲಿ ಜಲಕ್ರಾಂತಿ

ಬೇಸಿಗೆಯಲ್ಲಿ ಬತ್ತಿಹೋಗುವ ಕರಾವಳಿಯ ಕೆರೆ ಮತ್ತು ಬಾವಿಗಳಿಗೆ ಅಡ್ಡ ಬೋರ್ ಕೊರೆಯುವ ಮೂಲಕ ಮತ್ತೆ ಜೀವ ನೀಡಲಾಗುತ್ತಿದೆ. ಭೂಮಿಯೊಳಗೆ ಅಡ್ಡಲಾಗಿ ಕೊರೆದು ನೀರಿನ ಸೆಲೆಯನ್ನು ಪತ್ತೆಹಚ್ಚುವ ಈ ಯಶಸ್ವಿ ತಂತ್ರವು, ವರ್ಷಪೂರ್ತಿ ನೀರು ಹರಿಯುವಂತೆ ಮಾಡಿ ನೀರಿನ ಅಭಾವವನ್ನು ನೀಗಿಸುತ್ತಿದೆ.

Read Full Story
08:04 AM (IST) Apr 28

Karnataka News Live 28 April 2026Bengaluru - ಬೆತ್ತಲೆ ಸ್ಥಿತಿಯಲ್ಲಿ ಜಾರ್ಖಂಡ್ ಮೂಲದ ಯುವತಿಯ ಅರೆಕೊಳೆತ ಶವ ಪತ್ತೆ

ಜಾರ್ಖಂಡ್ ಮೂಲದ ಪೂಜಾ ದತ್ತಾ ಎಂಬ ಯುವತಿಯ ಮೃತದೇಹವು ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದು ಕೊ*ಲೆಯೋ ಅಥವಾ ಆತ್ಮ*ಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read Full Story
07:35 AM (IST) Apr 28

Karnataka News Live 28 April 2026ಕಾಂಗ್ರೆಸ್ಸಲ್ಲಿ ಅಹಿಂದ ದಂಗಲ್‌ - ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಲು ಒಂದು ಬಣ ಸಿದ್ಧತೆ

ಹುಬ್ಬಳ್ಳಿಯಲ್ಲಿ ಉದ್ದೇಶಿಸಿರುವ ಅಹಿಂದ ಸಮಾವೇಶವು ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು ಬಣಗಳನ್ನು ಸೃಷ್ಟಿಸಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಬಣವು ಪಕ್ಷಕ್ಕೆ ಲಾಭವೆಂದು ಸಮಾವೇಶಕ್ಕೆ ಒತ್ತಾಯಿಸಿದರೆ, ಮತ್ತೊಂದು ಬಣ ಪಕ್ಷಕ್ಕೆ ಹಾನಿಕರ ಎಂದು ವಿರೋಧ. ಈ ಗೊಂದಲ ಇದೀಗ ಹೈಕಮಾಂಡ್ ಅಂಗಳ ತಲುಪಿದೆ.

Read Full Story