Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ 11ನೇ ವಾರ ಹೊರಗಡೆ ಬಂದಿರುವ ಅಭಿಷೇಕ್ ಶ್ರೀಕಾಂತ್ ಅವರು ಗಿಲ್ಲಿ ನಟ ಹಾಗೂ ರಘು ನಡುವಿನ ಬಾಂಧವ್ಯದ ಜೊತೆಗೆ ರಘು ಬಳಿ ಮನವಿ ಮಾಡಿದ್ರೂ ಚಪಾತಿ ಕೊಟ್ಟಿಲ್ಲ ಎನ್ನುವ ವಿಚಾರ ಚರ್ಚೆಯಾಗಿದೆ.
- Home
- News
- State
- Karnataka News Live: BBK 12 - ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್ ಶ್ರೀಕಾಂತ್ ಏನಂದ್ರು?
Karnataka News Live: BBK 12 - ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್ ಶ್ರೀಕಾಂತ್ ಏನಂದ್ರು?

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಅವಿಶ್ವಾಸ ನಿರ್ಣಯ ಮಂಡನೆಗೂ ಪ್ರತಿಪಕ್ಷಗಳು ಅಣಿಯಾಗಿದ್ದವು, ಇದರ ಸೂಚನೆ ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಬ್ರೇಕ್ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಜತೆಗೆ ಬಿಜೆಪಿ ಒಡಕು, ಬಿಜೆಪಿ-ಜೆಡಿಎಸ್ ನಡುವಿನ ಸಾಮರಸ್ಯ ಕೊರತೆ, ಜೆಡಿಎಸ್ನಲ್ಲಿ ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರು ಪಕ್ಷದ ವಿರುದ್ಧವೇ ಧ್ವನಿ ಎತ್ತಿರುವುದನ್ನೂ ಕಾಂಗ್ರೆಸ್ ದಾಳವಾಗಿ ಬಳಸುವ ಸಾಧ್ಯತೆಯಿದೆ. ಮತ್ತೊಂದೆಡೆ ಕಬ್ಬು ಬೆಂಬಲ ಬೆಲೆ ಹೆಚ್ಚಳ ಮಾಡದಿರುವ ಕೇಂದ್ರದ ನಿರ್ಲಕ್ಷ್ಯ, ಸಕ್ಕರೆ ಎಂಎಸ್ಪಿ ದರ ಹೆಚ್ಚಿಸದ, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸದ ಕೇಂದ್ರ ಸರ್ಕಾರದಿಂದಲೇ ಕಬ್ಬು ಬೆಲೆ ಕುಸಿದಿದೆ ಎಂದು ಬೊಟ್ಟು ಮಾಡಿ ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜಾಗಿದೆ.
Karnataka News Live 9 December 2025BBK 12 - ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್ ಶ್ರೀಕಾಂತ್ ಏನಂದ್ರು?
Karnataka News Live 9 December 2025'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎದುರು ಗಳಗಳನೇ ಅತ್ತ ಕೊಪ್ಪಳದ ಯುವತಿ
ಧಾರವಾಡದಲ್ಲಿ ನಿಗದಿಯಾಗಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಮುಂದೆ ಕೊಪ್ಪಳ ಮೂಲದ ಯುವತಿಯೊಬ್ಬಳು, ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಿರಿ ಎಂದು ಕಣ್ಣೀರು ಹಾಕಿದ ಘಟನೆ ನಡೆಯಿತು.
Karnataka News Live 9 December 2025BBK 12 - ರಕ್ಷಿತಾ ಶೆಟ್ಟಿ ಆ ರೀತಿ ಮಾಡ್ತಾಳೆ ಅಂತ ಅಂದ್ಕೊಂಡಿರಲಿಲ್ಲ, ಶಾಕ್ ಆಯ್ತು - ಅಭಿಷೇಕ್ ಶ್ರೀಕಾಂತ್
Bigg Boss Kannada Season 12: ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದಿರುವ ಅಭಿಷೇಕ್ ಶ್ರೀಕಾಂತ್ ಅವರು ರಕ್ಷಿತಾ ಶೆಟ್ಟಿ ನಡುವಿನ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ. ರಕ್ಷಿತಾ ಆ ರೀತಿ ಮಾಡಿದ್ದು ಶಾಕ್ ಆಯ್ತು ಎಂದು ಹೇಳಿದ್ದಾರೆ. ಹಾಗಾದರೆ ರಕ್ಷಿತಾ ಏನು ಮಾಡಿದರು?
Karnataka News Live 9 December 2025ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ - ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್ನಲ್ಲಿಲ್ಲ..; - ಕೆಎನ್ ರಾಜಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧಾರದಿಂದ ಬದಲಾವಣೆ ಅನಿವಾರ್ಯವಾದರೆ, ಡಿಸಿಎಂ ಡಿಕೆ ಶಿವಕುಮಾರ್ ಮಾತ್ರವಲ್ಲದೆ ಇತರರು ಸಿಎಂ ರೇಸ್ನಲ್ಲಿದ್ದಾರೆ ಎಂದರು.
Karnataka News Live 9 December 2025ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರಿಯಾನಿ ಬಾಡೂಟ ವ್ಯಾಪಾರ ಮಾಡುತ್ತಿದ್ದ ಮಾದಮ್ಮ ಕುಟುಂಬ ಸಾಲದ ಸುಳಿಗೆ ಸಿಲುಕಿ, ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ಅಜ್ಜಿ, ತಾಯಿ ಹಾಗೂ ಮೊಮ್ಮಗ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ.
Karnataka News Live 9 December 2025ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ - ಎಸಿ ಕೋರ್ಟ್ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಸೌಜನ್ಯಾ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಗಡೀಪಾರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಕುರಿತು ವಿಚಾರಣೆಗಾಗಿ ಪುತ್ತೂರು ಎಸಿ ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ, ಅವರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ತಮಗೆ ದೇವರ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿದೆ ಎಂದರು.
Karnataka News Live 9 December 2025ಅಧಿವೇಶನದ ಮೊದಲ ದಿನವೇ ಕೇಬಲ್ ಆಪರೇಟರ್ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್!
ಬೆಳಗಾವಿ ಅಧಿವೇಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದ ಕೇಬಲ್ ಆಪರೇಟರ್ಗಳಿಗೆ ವಿದ್ಯುತ್ ಕಂಬಗಳಿಗೆ ವಿಧಿಸುವ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿ ಘೋಷಿಸಿದ್ದಾರೆ. ಈ ಮೊದಲು ಪ್ರತಿ ಕಂಬಕ್ಕೆ ₹150 ಇದ್ದ ಶುಲ್ಕವನ್ನು ಇದೀಗ ₹75ಕ್ಕೆ ಇಳಿಸಲಾಗಿದೆ.
Karnataka News Live 9 December 2025ಕೊಪ್ಪಳ - ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಡಿಸೆಂಬರ್ 20 ರಂದು ವಿವಾಹವಾಗಬೇಕಿದ್ದ ಭಾವಿ ದಂಪತಿ, ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಕೊಪ್ಪಳದ ಗಂಗಾವತಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಲಾರಿ ಅವರ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವು. ಮದುವೆ ಮನೆಯಲ್ಲಿ ಸೂತಕ.
Karnataka News Live 9 December 2025CM-DCM ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಈ ಸಭೆಯ ನಂತರ ನಾಯಕತ್ವ ಬದಲಾವಣೆಗೆ ಕದನ ವಿರಾಮ ಬಿದ್ದಿದೆ ಎಂಬ ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಪುತ್ರ, ಎಂಎಲ್ಎಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
Karnataka News Live 9 December 2025ಜೈಲಿನಲ್ಲಿಯೂ 'ಡಿ ಬಾಸ್' ದರ್ಬಾರ್ - ಮಲಗಿದ್ದ ಸಹ ಕೈದಿಗಳನ್ನು ಕಾಲಿನಿಂದ ನಟ ದರ್ಶನ್ ದರ್ಪ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ತಮ್ಮ ಸಹ ಕೈದಿಗಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ಹಿಂಸೆ ತಾಳಲಾರದೆ, ಇಬ್ಬರು ಸಹ ಕೈದಿಗಳು ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
Karnataka News Live 9 December 2025ಸಿಎಂ ಸಿದ್ದರಾಯ್ಯಗೆ ಈಶ್ವರಪ್ಪ ವಾರ್ನಿಂಗ್ - ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಭಗವದ್ಗೀತೆ ಕುರಿತ ಹೇಳಿಕೆ ಮತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ ಬಳಸಿದ ಪದಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ಓಲೈಕೆಗಾಗಿ ಸಿಎಂ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Karnataka News Live 9 December 2025ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟೀಸ್ - ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಸಿಎಂ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಹೈಕೋರ್ಟ್ ಈ ಹಿಂದೆ ಅರ್ಜಿಯನ್ನು ವಜಾಗೊಳಿಸಿತ್ತು.
Karnataka News Live 9 December 2025ಅನೇಕರ ಆಸೆ, ಹಾರೈಕೆ ಈಡೇರಿತು; Anchor Anushree ರೋಶನ್ ಜೋಡಿಗೆ ಯಾರೂ ದೃಷ್ಟಿ ಹಾಕ್ಬೇಡಿ..ಪ್ಲೀಸ್
Anchor Anushree News: ಕಳೆದ ಆಗಸ್ಟ್ ತಿಂಗಳಿನಲ್ಲಿ ನಿರೂಪಕಿ ಅನುಶ್ರೀ, ರೋಶನ್ ಮದುವೆ ಆಗಿದ್ದಾರೆ. ಕನ್ನಡದಲ್ಲಿ ನಿರೂಪಣೆ ಮೂಲಕ ಗಮನಸೆಳೆದಿರುವ ಅನುಶ್ರೀ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಗಿದೆ. ಇತ್ತೀಚೆಗೆ ಪತಿಯ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.
Karnataka News Live 9 December 2025ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ
ನಿನ್ನ ನಂಬಿಕೆಗೆ ನಾನು ಮಾಡಿದ್ದೇನೆ ಅಂತ ನನಗೆ ಗೊತ್ತು ಅಮ್ಮ. ಸಾಧ್ಯವಾದ್ರೆ ನನ್ನನ್ನು ಕ್ಷಮಿಸು ಅಮ್ಮ. ಸಾಯೋದಕ್ಕೆ ಭಯ ಆಗ್ತಿದೆ ಅಮ್ಮಾ. Sorry ಯವಿಟ್ಟು ಯಾರೂ ನನ್ನ ಹಾಗೆ ಮಾಡಿಕೊಳ್ಳಬೇಡಿ. ಈ ರೀತಿ ಇರೋ ನಾಯಿಗಳನ್ನು ನಂಬಿ ಮೋಸ ಹೋಗಬೇಡಿ.
Karnataka News Live 9 December 2025ಉಡುಪಿ - 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Karnataka News Live 9 December 2025ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್ ಹೇಳಿದ್ದೇನು?
ಧಾರ್ಮಿಕ ಕಾರಣ ನೀಡಿ ದೇಗುಲ ಮತ್ತು ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾಧಿಕಾರಿಯ ಅಮಾನತು ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸೇನಾ ಆದೇಶಕ್ಕಿಂತ ಧರ್ಮವನ್ನು ಮೇಲೆ ಇಡುವುದು ಘೋರ ಅಶಿಸ್ತು ಎಂದು ನ್ಯಾಯಾಲಯ ಹೇಳಿದೆ.
Karnataka News Live 9 December 2025ಬೆಂಗಳೂರು - ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ವಿರುದ್ಧ ಯುವತಿಯೊಬ್ಬಳು ಸಾಮೂಹಿಕ ಅತ್ಯಾ೧ಚಾರದ ದೂರು ನೀಡಿದ್ದಳು. ಆದರೆ, ಬಾಣಸವಾಡಿ ಪೊಲೀಸರ ತನಿಖೆಯಲ್ಲಿ ಇಬ್ಬರಿಗೂ ಮೊದಲೇ ಪರಿಚಯವಿದ್ದು, ಇದು ಒಪ್ಪಿಗೆಯ ಸಂಬಂಧವಾಗಿತ್ತು ಎಂಬುದು ಬಯಲಾಗಿದೆ. ಸದ್ಯ ಪೊಲೀಸರು ಯುವತಿಯ ಗೊಂದಲದ ಹೇಳಿಕೆ ಬಗ್ಗೆ ತನಿಖೆ..
Karnataka News Live 9 December 2025Bigg Boss 19 Winner ಘೋಷಣೆ; ಮೊದಲೇ ಪ್ರೀ ಪ್ಲ್ಯಾನ್ ಮಾಡಿದ್ದಕ್ಕೆ ತಿರುಗಿಬಿದ್ದ ಸಹಸ್ಪರ್ಧಿಗಳು!
Bigg Boss: ಬಿಗ್ ಬಾಸ್ ಶೋನಲ್ಲಿ ಗೌರವ್ ಖನ್ನಾ ( Gaurav Khanna ) ವಿಜೇತರಾಗಿದ್ದಾರೆ. ಆದರೆ ಈ ಟ್ರೋಫಿ ಸಿಕ್ಕಿದ್ದು ಸರಿ ಅಲ್ಲ ಎಂಬ ವಿರೋಧ ಕೇಳಿ ಬರುತ್ತಿದೆ. ಕೆಂಪು ಬಣ್ಣದ ಡ್ರೆಸ್ ಹಾಕಿಕೊಂಡೋರಿಗೆ, ಸಲ್ಮಾನ್ ಖಾನ್ ಬಲಭಾಗದಲ್ಲಿ ನಿಂತೋರಿಗೆ ಯಶಸ್ಸು ಸಿಗಲ್ಲ ಎನ್ನೋ ಚರ್ಚೆ ಶುರುವಾಗಿದೆ.
Karnataka News Live 9 December 2025ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು - Suhana Syed ಎಂದೂ ಹೇಳಿರದ ರಿಯಲ್ ಕಥೆ
Suhana Syed Marriage: ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್ ಅವರು ನಿತಿನ್ ಶಿವಾಂಶ್ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ.
Karnataka News Live 9 December 2025ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು - ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ
ಸಂವಿಧಾನದಿಂದಲೇ ಅಧಿಕಾರಕ್ಕೆ ಬಂದವರು, ಇಂದು ಅದೇ ಸಂವಿಧಾನವನ್ನು ತುಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗದ ಇವರು ದೇಶಕ್ಕಾಗಿ ಯಾವ ಒಳ್ಳೆಯ ಕೆಲಸವನ್ನು ಮಾಡಿಲ್ಲ